ಅರವಿಂದ್ ಕೇಜ್ರಿವಾಲ್ ಮೇಲೆ ಭಯೋತ್ಪಾದಕರ ದಾಳಿ ಸಾಧ್ಯತೆ – ಗುಪ್ತಚರ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಖಲಿಸ್ತಾನಿ ಭಯೋತ್ಪಾದಕರ ದಾಳಿ ಸಂಚು ರೂಪಿಸುತ್ತಿದ್ದಾರೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಸಂಸ್ಥೆಗಳು ನೀಡಿವೆ. ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳೆ ಈ ದಾಳಿಯ ಸಂಭವವಿರುವ ಸಾಧ್ಯತೆ ಬಗ್ಗೆ ಚರ್ಚೆ ಮುನ್ನಲೆಗೆ ಬಂದಿದೆ.

Nk Cake House

ಖಲಿಸ್ತಾನಿ ಭಯೋತ್ಪಾದಕರು ದೆಹಲಿಯ ವಾತಾವರಣವನ್ನು ಹಾಳುಮಾಡಲು ನಾಯಕರು ಮತ್ತು ಜನಸಾಮಾನ್ಯರ ಮೇಲೆ ದಾಳಿ ನಡೆಸುವ ಸಾಧ್ಯತೆಯನ್ನು ಸೂಚಿಸಿದ್ದಾರೆ. ಪ್ರಸ್ತುತ, ಕೇಜ್ರಿವಾಲ್ ಅವರಿಗೆ ಝಡ್ ಕೆಟಗರಿ ಭದ್ರತೆ ಒದಗಿಸಲಾಗಿದ್ದು, ಸಾರ್ವಜನಿಕ ಸಭೆಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಲಪಡಿಸಲಾಗಿದೆ.

Also Read  ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ 🔥ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ

ಹಿಂದಿನ ದಾಳಿಗಳ ಪೈಕಿ ಕೆಲವು ಘಟನೆಗಳು: ಮೇ 2019: ಸುಲ್ತಾನ್‌ಪುರಿಯ ರೋಡ್ ಶೋ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಕೇಜ್ರಿವಾಲ್ ಅವರಿಗೆ ಹಾನಿ ಮಾಡಿದ್ದರು. ನವೆಂಬರ್ 2018: ಮೆಣಸಿನ ಪುಡಿ ದಾಳಿ. ಏಪ್ರಿಲ್ 2016: ಶೂ ಎಸೆದು ದಾಳಿ. ಈಗಾಗಲೇ ದೆಹಲಿಯ ಚುನಾವಣಾ ಪ್ರಕ್ರಿಯೆಗೆ ತೀವ್ರ ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ. ಮತದಾನ ಫೆಬ್ರವರಿ 5ರಂದು ನಡೆಯಲಿದ್ದು, ಫಲಿತಾಂಶ ಫೆಬ್ರವರಿ 8ರಂದು ಪ್ರಕಟಗೊಳ್ಳಲಿದೆ.

error: Content is protected !!
Scroll to Top