(ನ್ಯೂಸ್ ಕಡಬ) newskadaba.com ಜ.15 : ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿಸಿರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾಯವಾಗಿದ್ದು ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಆರ್ಎಸ್ಎಸ್ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್ಎಸ್ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ಹೀಗಾಗಿ ಈ ಎರಡು ಸಂಸ್ಥೆಗಳು ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ ಎಂದರು. ಮಾಧ್ಯಮವು ಇನ್ನು ಕೂಡ ಮುಕ್ತ ಮತ್ತು ನ್ಯಾಯಯುತವಾಗಿಲ್ಲ. ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ ಸುಮಾರು ಒಂದು ಕೋಟಿ ಹೊಸ ಮತದಾರರು ದಿಢೀರ್ ಕಾಣಿಸಿಕೊಂಡಿದ್ದಾರೆ.ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆ ಇದೆ ಮತ್ತು ಪಾರದರ್ಶಕವಾಗಿರುವುದು ಚುನಾವಣಾ ಆಯೋಗದ ಕರ್ತವ್ಯ ಎಂದು ಹೇಳಿದರು.ಈ ದೇಶದಲ್ಲಿ ಬಿಜೆಪಿಯನ್ನು ತಡೆಯಲು ಬೇರೆ ಯಾವುದೇ ಪಕ್ಷದಿಂದ ಸಾಧ್ಯವಿಲ್ಲ. ಅವರನ್ನು ತಡೆಯಬಲ್ಲ ಏಕೈಕ ಪಕ್ಷ ಕಾಂಗ್ರೆಸ್ ಎಂದರು.











