ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ

(ನ್ಯೂಸ್ ಕಡಬ) newskadaba.com, ಫೆ.11. ಪ್ಯಾರಿಸ್: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ರಾತ್ರಿ 1:00 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಜೊತೆಗೆ ಮನೆಮಂದಿಗೆ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ

error: Content is protected !!
Scroll to Top