ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು

(ನ್ಯೂಸ್ ಕಡಬ) newskadaba.com, ಫೆ.11.  : ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಸೇಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ವಿಚಾರವಾಗಿ ಜಗಳ ನಡೆದಿದೆ. ಕೊನೆಗೆ ಈ ಜಗಳ ತಾರಕ್ಕೇರಿ ಸರವಣನ್ ಕಂದಗುರುವನ್ನು ತಳ್ಳಿದ್ದಾನೆ. ಪರಿಣಾಮ ಕಂದಗುರು ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎನ್ನಲಾಗಿದೆ. ಕಂದಗುರುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದ್ದಾನೆ.

ಈ ಘಟನೆಯ ಬೆನ್ನಲ್ಲೇ ಸೇಲಂ ಪೊಲೀಸರು ಸರವಣನ್‌ನನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಜಗಳಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Scroll to Top