ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು 100 ಮೀ.ನಷ್ಟು ಚಲಿಸಿದ ಲಾರಿ – ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com, ಫೆ.12. ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು ೧೦೦ ಮೀ.ನಷ್ಟು ಚಲಿಸಿ ನಿಂತಿರುವ ಘಟನೆ ಇಂದು ಬೆಳಗ್ಗೆ 7.45ರ ಸುಮಾರಿಗೆ ನಡೆದಿದೆ.

ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.‌ ಲಾರಿಯು ಬೆಂಗಳೂರು ಭಾಗದಿಂದ ಮಂಗಳೂರು ಭಾಗಕ್ಕೆ ಚಲಿಸುತ್ತಿತ್ತು‌ ಎನ್ನಲಾಗಿದೆ.

Also Read  ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ'ಗಿಣಿ'

error: Content is protected !!
Scroll to Top