ಸರ್ವೆ: ಷಣ್ಮುಖ ಯುವಕ ಮಂಡಲದಿಂದ ಪ್ರಾ. ಆರೋಗ್ಯ ಕೇಂದ್ರಕ್ಕೆ ನೆಬ್ಯುಲೈಸರ್ ಕೊಡುಗೆ

 (ನ್ಯೂಸ್ ಕಡಬ) newskadaba.com ಸವಣೂರು, ಮಾ.29.  ಸರ್ವೆ ಷಣ್ಮುಖ ಯುವಕ ಮಂಡಲ ಇದರ ವತಿಯಿಂದ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಸಿರಾಟದ ತೊಂದರೆಯ ರೋಗಿಗಳ ಅನುಕೂಲಕ್ಕಾಗಿ ನೆಬ್ಯುಲೈಸರ್ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು.ಯುವಕ ಮಂಡಲದ ಗೌರವಾಧ್ಯಕ್ಷ ವಸಂತ್ ಎಸ್.ಡಿ ಹಾಗೂ ಯುವಕ ಮಂಡಲದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು ಅವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ, ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಎಸ್.ವಿ ಸರ್ವೆದೋಳಗುತ್ತು, ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‍ನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್, ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಗೌರವ ಪುರಸ್ಕೃತ ರಕ್ತದಾನಿ, ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್ ನಡುಬೈಲುಗುತ್ತು, ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ್ ಎಸ್.ಡಿ ಸರ್ವೆದೋಳಗುತ್ತು, ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ, ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಯುವಜನ ಒಕ್ಕೂಟದ ಆಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಪ್ರಧಾನ ಕಾರ್ಯದರ್ಶಿ, ನೆಹರು ಯುವ ಕೇಂದ್ರದ ಸಂಯೋಜಕಿ ಗುರುಪ್ರಿಯಾ ನಾಯಕ್‍ ಉಪಸ್ಥಿತರಿದ್ದರು.

Also Read  ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ ➤ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶ & ಪರಿಸರ ಸ್ನೇಹಿ ಪೀಡೆಗಳ ನಿರ್ವಹಣೆಯ ತರಬೇತಿ

ಕಾರ್ಯಕ್ರಮ ಸಂಯೋಜಕ ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಜೇಶ್ ಎಸ್.ಡಿ ಅಲೇಕಿ ಸ್ವಾಗತಿಸಿದರು.ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಾಂಜಲಿ ಅವರು ವಂದಿಸಿದರು. ಡಾ.ಪ್ರವೀಣ್ ಎಸ್.ಡಿ. ಸರ್ವೆದೋಳಗುತ್ತು ಅವರು ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top