ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆ ಅನುಷ್ಠಾನ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ರಾಜ್ಯದ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 12 ಸಾವಿರ ರೂ.ನಿಂದ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ.

Scroll to Top