ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com , .02 : ಆರೋಗ್ಯ ಹದಗೆಟ್ಟ ಕಾರಣ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಬಿಹಾರದ ಪರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿಗೆ ತೆರಳುವ ಸಲುವಾಗಿ ಸಂಜೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗಿ ಆರೋಗ್ಯ ಹದಗೆಟ್ಟಿದೆ. ಏರ್ ಅಂಬುಲೆನ್ಸ್‌ ಮೂಲಕ ಲಾಲೂ ಪ್ರಸಾದ್ ಅವರನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುವ ಸಾಧ್ಯತೆಯಿದೆ. ಚಿಂತಿಸುವ ಅಗತ್ಯವಿಲ್ಲ ಎಂದು ಆರ್‌ಜೆಡಿ ನಾಯಕ ಭಾಯಿ ವೀರೇಂದ್ರ ತಿಳಿಸಿದ್ದಾರೆ.

Scroll to Top