(ನ್ಯೂಸ್ ಕಡಬ) newskadaba.com ಕಡಬ, ಮೇ.02. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು ಕಡಬದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೇರಿದ ಕಾರ್ಯಕರ್ತರು ಬಳಿಕ ರಸ್ತೆ ತಡೆ ನಡೆಸಿ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಡಬ ಪೋಲಿಸರು ಬಂದೋಬಸ್ತು ಏರ್ಪಡಿಸಿದ್ದಾರೆ. ಕಡಬ ಪೇಟೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಯಿತು.