ಮಂಗಳೂರು: ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.05: ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು.

ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. ಶರಣ್ ಹತ್ಯೆಯಾಗಲು ತಯಾರಾಗು’’ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು. ಶರಣ್ ಪಂಪ್ವೆಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್​ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. ‘‘ಅಶ್ರಫ್ ಕೊಂದ ಭರತ್​ನನ್ನು ಮರೆತಿಲ್ಲ ಎಂದು ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ‘‘Wait and watch’’ ಎಂದು ತಲ್ವಾರ್ ಫೋಟೋ ಪೋಸ್ಟ್ ಮಾಡಿದ್ದರು. ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿರುವ ಸಂದರ್ಭದಲ್ಲೇ ಇಂತಹ ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಸಾಮಾಜಿಕ ಮಾಧ್ಯಮಗಳಾಗಿ ಹರಿದಾಡಿದ್ದವು.

Also Read  ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

ರಿಯಾಜ್ ಕಡಂಬು ವಿರುದ್ಧ ಬೆದರಿಕೆ- ಪ್ರಕರಣ ದಾಖಲು
ಎಸ್​​ಡಿಪಿಐ ಮುಖಂಡ ರಿಯಾಜ್ ಕಡಂಬು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದವರ ಮೇಲೆ ಎಫ್​ಐಆರ್​​ ದಾಖಲಿಸಲಾಗಿದೆ. ಕೊಲೆ ಬೆದರಿಕೆ ಹಾಕಿದ ಕೆ.ಆರ್ ರಾಕೇಶ್ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಯೂಟ್ಯೂಬ್‌ನಲ್ಲಿ ಸುಹಾಸ್ ಶೆಟ್ಟಿ ಕೊಲೆ ಸುದ್ದಿ ಪ್ರಸಾರವಾಗುತ್ತಿದ್ದ ವೇಳೆ ಕಮೆಂಟ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ‘‘Next is Riyaz Kadanbu hit list’’ ಎಂದು @Krrakesh9456 ಖಾತೆ ಮೂಲಕ ಕಮೆಂಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಿಯಾಜ್ ಕಡಂಬು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

error: Content is protected !!
Scroll to Top