ಕುಂಬಳೆ: ಹಾರ್ಡ್ ವೇರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ-ಅಪಾರ ಹಾನಿ

(ನ್ಯೂಸ್ ಕಡಬ) newskadaba.com , ಮೇ.17: ಕಾಸರಗೋಡು: ಹಾರ್ಡ್‌ವೇರ್ ಗೋದಾಮು ಅಗ್ನಿಗಾಹುತಿಯಾದ ಘಟನೆ ಕುಂಬಳೆ ಸಮೀಪದ ಸೀತಾಂಗೋಳಿ ಮುಖಾರಿಗದ್ದೆ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಬದಿಯಡ್ಕ ನಿವಾಸಿ ಹರ್ಷಾದ್ ಎಂಬವರ ಮಾಲಕತ್ವದ ಅರ್ಶ್ ಎಂಟರ್ ಪ್ರೈಸಸ್‌ ನ ಗೋದಾಮಿನಲ್ಲಿ ಈ ದುರಂತ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಅನಾಹುತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಯಿಂದ ತಿಳಿದುಬಂದಿದೆ. ಘಟನೆಯಿಂದ ಭಾರೀ ಪ್ರಮಾಣದ ಹಾನಿ ಉಂಟಾಗಿದ್ದು, ಕಾಸರಗೋಡು ಹಾಗೂ ಉಪ್ಪಳದಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.

Also Read  ಚಲಿಸುತ್ತಿದ್ದ ಕಾರಿಗೆ ಬೆಂಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

error: Content is protected !!
Scroll to Top