ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಇಂದು ಮೈಸೂರಲ್ಲಿ 63ವರ್ಷ ಪುರುಷ ಕೊರೊನಾಗೆ ಬಲಿಯಾಗಿದ್ದಾನೆ. ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮುಂಗಾರಿನ ಎಂಟ್ರಿ ಆಗಿರೋದರಿಂದ ಕೊರೊನಾ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 24ರ ಗಡಿ ದಾಟಿದೆ. ಕಳೆದ 24ಗಂಟೆಗಳಲ್ಲಿ ಕೊರೊನಾ ಪ್ರಕರಣ 367ಕ್ಕೆ ಏರಿಕೆಯಾಗಿದೆ.

Scroll to Top