ಕಮಲ್ ಹಾಸನ್‌ಗೆ ಹೈಕೋರ್ಟ್‌ ತೀವ್ರ ತರಾಟೆ: ʼಕ್ಷಮೆ ಕೇಳಿʼ ಎಂದ ನ್ಯಾಯಾಧೀಶರು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕನ್ನಡದ ಕುರಿತು ಉಡಾಫೆಯ ಮಾತನಾಡಿ, ಬಳಿಕ ತಾನು ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ತೋರಿದ ತಮಿಳು ನಟ ಕಮಲ್‌ ಹಾಸನ್‌ ಅವರನ್ನು ಕರ್ನಾಟಕ ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ಭದ್ರತೆ ಕೋರಿದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಭಾಷೆಯ ಕುರಿತು ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸುವಂತೆ ಸೂಚಿಸಿದ್ದಾರೆ.

ತಮಿಳು ನಟ ಮತ್ತು ನಿರ್ಮಾಪಕ ಕಮಲ್ ಹಾಸನ್ ಅವರು ತಮ್ಮ ಹೊಸ ಸಿನಿಮಾ ಥಗ್ ಲೈಫ್ ಸಿನೆಮಾ ಬಿಡುಗಡೆಗೆ ಭದ್ರತೆ ನೀಡುವಂತೆ ಕೋರಿರುವ ಅರ್ಜಿ ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆಗೆ ಒಳಪಟ್ಟಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿ ಕಮಲ್ ಹಾಸನ್‌ಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

Also Read  ಕುಸ್ತಿಪಟು ವಿನೇಶ್ ಪೋಗಟ್ ಗೆ ಚಿನ್ನದ ಪದಕ...!

ಕಮಲ್ ಹಾಸನ್ ಅವರು ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಗೆ ಕನ್ನಡದ ಕೆಲವು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಇದೇ ಕಾರಣದಿಂದಾಗಿ ಸಿನಿಮಾಕ್ಕೆ ವಿರೋಧ ಉಂಟಾಗಿದೆ. ವಿಚಾರಣೆ ವೇಳೆ ನ್ಯಾಯಾಧೀಶರು ತೀವ್ರ ತರಾಟೆಗೆ ತೆಗೆದುಕೊಂಡರು. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದೆಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದಾರೆ. ಅವರು ಇತಿಹಾಸಕಾರರೇ? ಇಂತಹ ಹೇಳಿಕೆಗಳಿಂದ ಕನ್ನಡಿಗರ ಭಾವನೆಗೆ ಧಕ್ಕೆ ಉಂಟಾಗುತ್ತದೆ. ಕಮಲ್ ಹಾಸನ್ ಅವರು ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆ ಕೇಳಬೇಕು ಎಂದು ನ್ಯಾಯಾಧೀಶರು ಹೇಳಿದರು.

ಅಭಿವ್ಯಕ್ತಿ ಸ್ವಾತಂತ್ರ್ಯ ಮಹತ್ವದ್ದಾಗಿದ್ದರೂ, ಅದು ಇನ್ನೊಬ್ಬರ ಭಾವನೆಗೆ ಧಕ್ಕೆ ತರುವಂತಿರಬಾರದು. ಈ ಪರಿಸ್ಥಿತಿಗೆ ಕಾರಣನಾಗಿರುವ ನೀವು ಈಗ ಭದ್ರತೆ ಕೋರುತ್ತಿದ್ದೀರಿ. ನಿಮಗೆ ಲಕ್ಷಾಂತರ ರೂಪಾಯಿ ಹೂಡಿಕೆ ಇರಬಹುದು, ಆದರೆ ಕನ್ನಡಿಗರ ಭಾವನೆ ಅವುಗಳಿಗಿಂತ ಉನ್ನತವಾದದ್ದು, ಕಮಲ್ ಹಾಸನ್ ಅವರು ಸಾಮಾನ್ಯ ವ್ಯಕ್ತಿಯಲ್ಲ, ಅವರು ಸಾರ್ವಜನಿಕ ವ್ಯಕ್ತಿ. ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳುತ್ತಿಲ್ಲ, ಬದಲಿಗೆ ಹೇಳಿದ್ದು ಸರಿಯೆಂದು ಮತ್ತೊಮ್ಮೆ ಹೇಳುತ್ತಿದ್ದಾರೆ. ಈ ರೀತಿಯ ಹೇಳಿಕೆಗಳಿಂದ ಕನ್ನಡದ ಭಾವನೆಗೆ ಧಕ್ಕೆ ತರೋದನ್ನ ಒಪ್ಪುವುದಿಲ್ಲ. ಹೀಗಿದ್ದರೆ, ಕರ್ನಾಟಕ ಯಾಕೆ ನಿಮಗೆ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

error: Content is protected !!
Scroll to Top