ತಕ್ಷಣ ಆರ್‌ಸಿಬಿ ವಿಜಯೋತ್ಸವ ಬೇಡವೆಂದರೂ ನಮ್ಮ ಮಾತು ಕೇಳಲೇ ಇಲ್ಲ: ಹಿರಿಯ ಪೊಲೀಸ್ ಅಧಿಕಾರಿಗಳಿಮದ ಅಸಮಾಧಾನ

(ನ್ಯೂಸ್ ಕಡಬ) newskadaba.com, ಜೂ.05. ತಕ್ಷಣವೇ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸುವ ಬದಲು ಒಂದು ವಾರದ ನಂತರ ಮಾಡುವಂತೆ ಸಲಹೆ ನೀಡಲಾಗಿತ್ತು. ಆದರೆ ಅದನ್ನು ಕಡೆಗಣಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಗೆಲುವಿಗೆ ಸಂಬಂಧಿಸಿ ಬುಧವಾರ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಮಂಗಳವಾರ ರಾತ್ರಿಯಿಂದಲೇ ಸರ್ಕಾರ ಮತ್ತು ಫ್ರಾಂಚೈಸಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೆವು. ಜನರ ಭಾವನೆ, ಉದ್ವೇಗ ತುಸು ತಣ್ಣಗಾದ ನಂತರ ಕಾರ್ಯಕ್ರಮ ಆಯೋಜಿಸುವುದು ಸೂಕ್ತ ಎಂಬ ಸಲಹೆ ನೀಡಿದ್ದೆವು. ಮುಂದಿನ ಭಾನುವಾರ ಕಾರ್ಯಕ್ರಮ ಆಯೋಜಿಸಲು ಶಿಫಾರಸು ಮಾಡಿದ್ದೆವು ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

error: Content is protected !!
Scroll to Top