(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ಉಡುಪಿ-ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರಾವಳಿಯಿಂದ ಉಡುಪಿ ಕಡೆಗೆ ಹೋಗುವ ರಸ್ತೆಯಲ್ಲಿ, ಶಿರಬೀಡು ಬಳಿ ಸಂಭವಿಸಿದೆ.
ಅಪಘಾತ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು.

ಇವರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಷೇಕ್ ಆಚಾರ್ಯ, ಅಭಿಷೇಕ್ ಹಾಗೂ ಮತ್ತಿಬ್ಬರು ವಾಹನದಲ್ಲಿದ್ದರು ಎಂದು ವರದಿಯಾಗಿದೆ.