(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಕಮಿಷನರ್ ಬಿ.ದಯಾನಂದ್, ಅಡಿಷನಲ್ ಕಮಿಷನರ್ ವಿಕಾಸ್ ಕುಮಾರ್, ಸೆಂಟ್ರಲ್ ಡಿಸಿಪಿ ಶೇಖರ್ ತೆಕ್ಕಣ್ಣನವರ್, ಎಸಿಪಿ ಬಾಲಕೃಷ್ಣ, ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಲಾಗಿದೆ.