(ನ್ಯೂಸ್ ಕಡಬ) newskadaba.com ಜೂ. 10. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15ರಿಂದ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ತಿಳಿಸಿದರು. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.












