ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ..!

(ನ್ಯೂಸ್ ಕಡಬ) newskadaba.com ಜೂ. 10. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15ರಿಂದ ದೇವಾಲಯಗಳನ್ನು ಪ್ಲಾಸ್ಟಿಕ್‌ ಮುಕ್ತ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ತಿಳಿಸಿದರು. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.

Scroll to Top