ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..!

(ನ್ಯೂಸ್ ಕಡಬ) newskadaba.com ಜೂ. 10. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಹಿತ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದುಪಡಿಸಬೇಕೆಂದು ರಾಜ್ಯ ಸರಕಾರಕ್ಕೆ ಇಂಡಿಯನ್ ಪೊಲೀಸ್ ಫೌಂಡೇಶನ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪೂರ್ವ ತಯಾರಿ ಇಲ್ಲದೇ ಏಕಾಏಕಿ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಬರುವಂತೆ ಆಹ್ವಾನಿಸಿತ್ತು. ಆರಂಭದಲ್ಲೇ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದರು. ಊಹೆಗೂ ಮೀರಿದ ಜನ ಕಾರ್ಯಕ್ರಮಗಳಿಗೆ ಬಂದಿದ್ದರಿಂದ ಪೊಲೀಸರಿಗೆ ಬಂದೋಬಸ್ತ್ ವೇಳೆ ಕಷ್ಟವಾಗಿದೆ. ಹೀಗಾಗಿ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

error: Content is protected !!
Scroll to Top