ಕಾಲ್ತುಳಿತ ಪ್ರಕರಣ- ಮೃತ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba.com ಜೂ. 10. ಐಪಿಎಲ್ ನಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡ ಆರ್ ಸಿಬಿ ತಂಡದ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೊಳಗಾಗಿ ಜೀವ ಕಳೆದುಕೊಂಡಿರುವ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಸರ್ಕಾರ ಪರಿಹಾರದ ಚೆಕ್ ನ್ನು ಜಿಲ್ಲಾಧಿಕಾರಿಗಳು ಹಸ್ತಾಂತರ ಮಾಡಿದ್ದಾರೆ.

ಸರ್ಕಾರದ ಪರಿಹಾರ ಸ್ವೀಕರಿಸಿ ಮಾತನಾಡಿದ ಚಿನ್ಮಯಿ ಶಟ್ಟಿ ತಂದೆ ಕರುಣಾಕರ ಶೆಟ್ಟಿ, ನಾವು ಮಗಳನ್ನು ಕಳೆದುಕೊಂಡಿದ್ದೇವೆ. ಈ ನೋವು ನಮಗೆ ನಿರಂತರ. ಈ ದುರ್ಘಟನೆಗೆ ಸರ್ಕಾರವೇ ನೇರ ಹೊಣೆ. ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ಮಾಡಿಸಿ ಸಾವು ಹೇಗೆ ಸಂಭವಿಸಿದೆ ಅನ್ನೋದು ಬೆಳಕಿಗೆ ಬರಲಿ ಎಂದು ಹೇಳಿದ್ದಾರೆ.

error: Content is protected !!
Scroll to Top