ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜೂನ್ 13 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 6:55ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 7:25- ಸರ್ಕ್ಯೂಟ್ ಹೌಸ್, 9 ಗಂಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 12:4ಕ್ಕೆ ವಿಮಾನ ನಿಲ್ದಾಣದಿಂದ ಹೈದರಾಬಾದ್‍ ಗೆ ನಿರ್ಗಮಿಸಲಿದ್ದಾರೆ.

error: Content is protected !!
Scroll to Top