ಅನ್ನಭಾಗ್ಯದ ಅಕ್ಕಿ ದಾಸ್ತಾನು ಪತ್ತೆ- 56 ಕ್ವಿಂಟಾಲ್ ಅಕ್ಕಿ ಸಹಿತ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 11. ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಡಿ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ನಡೆದಿದೆ.

ಬಂಧಿತನನ್ನು ವಾಸುದೇವ ಪ್ರಭು ಎಂದು ಗುರುತಿಸಲಾಗಿದೆ. ಆರೋಪಿಯು ತನಗೆ ಸೇರಿದ ಜನರಲ್ ಸ್ಟೋರ್ ಒಂದರಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿದ್ದ ಎನ್ನಲಾಗಿದೆ. ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಆಹಾರ ನಿರೀಕ್ಷಕರು ಮತ್ತು ಹಿರಿಯಡ್ಕ ಪೊಲೀಸರು ದಾಳಿ ಮಾಡಿ, ಒಟ್ಟು 131 ಪ್ಲಾಸ್ಟಿಕ್ ಚೀಲಗಳಲ್ಲಿದ್ದ 1,27,880 ರೂ. ಮೌಲ್ಯದ ಒಟ್ಟು 55.60 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top