(ನ್ಯೂಸ್ ಕಡಬ) newskadaba.com ಜೂ. 11. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ. ಅರ್ಜಿಯ ವಾದಗಳನ್ನು ಮಂಗಳವಾರದಂದು ಆಲಿಸಿದ್ದ ಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೆ.ಲಕ್ಷ್ಮಣ್ ಅವರು ಸಿಬಿಐ ನ್ಯಾಯಾಲಯದ ತೀರ್ಪನ್ನು ತಾತ್ಕಾಲಿಕವಾಗಿ ತಡೆಹಿಡಿದು ತೀರ್ಪು ನೀಡಿದ್ದಾರೆ. ಇದೀಗ ಷರತ್ತುಬದ್ದ ಜಾಮೀನು ನೀಡಿರುವ ಕೋರ್ಟ್, ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿ ನೀಡುವಂತೆ ಸೂಚಿಸಿದೆ. ಅಲ್ಲದೇ ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ. ಪಾಸ್ ಪೋರ್ಟ್ ನ್ನು ಒಪ್ಪಿಸುವಂತೆಯೂ ಆದೇಶಿಸಿದೆ.