ಜುಗಾರಿ ಅಡ್ಡೆಗೆ ದಾಳಿ ನಡೆಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ ವಿಟ್ಲ ಪಿಎಸ್ಐ ಸಸ್ಪೆಂಡ್

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 11. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪದಡಿ ವಿಟ್ಲ ಎಸೈ ಕೌಶಿಕ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ವರದಿಯ ಪ್ರಕಾರ ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಸ್ಥಳಕ್ಕೆ ವಿಟ್ಲ ಪಿಎಸ್ಐ ಕೌಶಿಕ್ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದೇ ಇದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಪತ್ತೆಯಾಗಿತ್ತು. ಈ ಬಗ್ಗೆ ಪಿಎಸ್ಐ ಕೌಶಿಕ್ ಬಿ.ಸಿ ರವರು ಸೂಕ್ತ ಕಾನೂನಾತ್ಮಕ ಕ್ರಮ ಜರುಗಿಸದೇ ಸದ್ರಿ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಹೇಳಿದ್ದಾರೆ. ಬಳಿಕ ಸದ್ರಿ ಬೈಕ್‌ ಮಾಲೀಕನಿಗೆ ಮೂರನೇ ವ್ಯಕ್ತಿಯ ಮೂಲಕ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿರುತ್ತದೆ. ಸದ್ರಿ ಘಟನೆಗೆ ಸಂಬಂಧಿಸಿದಂತೆ ಅವರ ಮೇಲೆ ಇಲಾಖಾ ಶಿಸ್ತು ಕ್ರಮದನ್ವಯ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

error: Content is protected !!
Scroll to Top