(ನ್ಯೂಸ್ ಕಡಬ) newskadaba.com ಕಡಬ, ಜೂ. 12. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ, ಗಣಿತದ ಪರಿಕರಗಳನ್ನು ಒಳಗೊಂಡ ಕಿಟ್ಟನ್ನು ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ.ಎಸ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ-ಶಿಕ್ಷಕರೇತರ ವೃಂದದವರು ಉಪಸ್ಥಿತರಿದ್ದರು.
ಕಡಬ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಸ್ವತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿ ವಿತರಣೆ
