(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ನಾಗರಿಕ ರಕ್ಷಣಾ ವ್ಯವಸ್ಥೆಯು ಸ್ವಯಂ ಸೇವಾ ಮಾದರಿಯಾಗಿದ್ದು, ಮೇ 7 ರಂದು ಭಾರತದ 400 ಜಿಲ್ಲೆಗಳಲ್ಲಿ ರಾಷ್ಟ್ರವ್ಯಾಪಿ ನಾಗರಿಕ ರಕ್ಷಣಾ ಅಣಕು ಕವಾಯತು ನಡೆಸಲಾಗಿರುತ್ತದೆ. ಪ್ರಸ್ತುತ ಭಾರತದ 244 ವಿವಿಧ ಜಿಲ್ಲೆಗಳಲ್ಲಿ ವ್ಯವಸ್ಥೆಯು ಅಸ್ತಿತ್ವದಲ್ಲಿದ್ದು, ಯುದ್ಧ ಹಾಗೂ ಶಾಂತಿಯ ಸಂದರ್ಭದಲ್ಲಿ ಇದರ ಜವಾಬ್ದಾರಿಯನ್ನು ನಿರ್ದಿಷ್ಟಪಡಿಸಲಾಗಿರುತ್ತದೆ. ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿರುವ ಮಾಜಿ ಸೈನಿಕರು (Non Reserve List) ಸ್ವಯಂಪ್ರೇರಿತವಾಗಿ ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ www.civildefencewarriors.gov.in ವೆಬ್ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು.
ಮಾಜಿ ಸೈನಿಕರು ನೋಂದಾವಣಿಯ ಮಾಹಿತಿಯನ್ನು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರ ಇ-ಮೇಲ್ dydirdswrmlore@gmail.com ಅಥವಾ ದೂರವಾಣಿ ಸಂಖ್ಯೆ 0824-2450933 ಗೆ ನೀಡುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.