ವೈದ್ಯರ ವರ್ಗಾವಣೆಗೆ ಆರೋಗ್ಯ ಮಂಡಳಿ ರಚಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ವೈದ್ಯರ ವರ್ಗಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮಂಡಳಿಯು ನೀಡಿರುವಂತಹ ಪ್ರಮಾಣ ಪತ್ರವನ್ನು ಮತ್ತೊಮ್ಮೆ ಪರಿಶೀಲನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರವು ರಾಜ್ಯ ಆರೋಗ್ಯ ಮಂಡಳಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ.

ಈ ಆರೋಗ್ಯ ಮಂಡಳಿಯು ನಗರದ ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಮಂಡಳಿಯಲ್ಲಿ ಒಬ್ಬರು ಅಧ್ಯಕ್ಷರು ಸೇರಿ 15 ಮಂದಿ ಸದಸ್ಯರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ. ಕೆ.ಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಮಂಡಳಿಯ ಅಧ್ಯಕ್ಷರಾಗಿದ್ದು, ಇಲ್ಲಿನ ಸರ್.ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆ, ಜಯನಗರದ ಸಾರ್ವಜನಿಕ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಜ್ಞ ವೈದ್ಯರು ಸದಸ್ಯರಾಗಿದ್ದಾರೆ ಎಂದು ತಿಳಿಸಿದೆ. ರಾಜ್ಯ ಆರೋಗ್ಯ ಮಂಡಳಿಯು ವರ್ಗಾವಣೆ ಪ್ರಕರಣಗಳಲ್ಲಿ ಆದ್ಯತೆ ಮೇರೆಗೆ ಪರಿಶೀಲಿಸಿ ಸಮಯವನ್ನು ಪರಿಗಣಿಸಿ ವರದಿಯನ್ನು ಸರಕಾರಕ್ಕೆ ಸಲ್ಲಿಸಬೇಕು. ವೈದ್ಯರ ವರ್ಗಾವಣೆ, ವೈದ್ಯಕೀಯ ರಜೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಅವಶ್ಯಕತೆ ಇದ್ದಲ್ಲಿ ಮಾತ್ರ ಅಧ್ಯಕ್ಷರು ತಜ್ಞ ವೈದ್ಯರನ್ನು ಆಹ್ವಾನಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

error: Content is protected !!
Scroll to Top