ಕೋಮು ಸಂಘರ್ಷ ತಡೆಯುವ ಸ್ಪೆಷಲ್ ಆ್ಯಕ್ಷನ್ ಫೋರ್ಸ್(ಎಸ್ಎಎಫ್) ಉದ್ಘಾಟನೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಕರಾವಳಿಯಲ್ಲಿ ನಡೆಯುವ ಕೋಮು ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆಯನ್ನು (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಇಂದು (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.





ಈ ವೇಳೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ, ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌ ನಿರ್ದೇಶಕ ಡಾ.ಎಂ.ಎ.ಸಲೀಂ, ಎಡಿಜಿಪಿ ಮುರುಗನ್, ಐಜಿಪಿ ಅಮಿತ್ ಸಿಂಗ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಮೊದಲಾದವರು ಉಪಸ್ಥಿತರಿದ್ದರು.






error: Content is protected !!
Scroll to Top