(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 13. ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ಅತಿಯಾದ ವೇಗದಿಂದ ಬೈರಿಕಟ್ಟೆಯ ಕೆಳಗಿನ ಕ್ರಾಸಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತ ಘಟನೆ ನಡೆದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಿತ್ಯವೂ ಹೀಗೆ ಬಸ್ ಚಾಲಕರ ಅತಿಯಾದ ವೇಗದಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು ಭಯಭೀತರಾಗಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಬೇಜವಾಬ್ದಾರಿ ಚಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.