(ನ್ಯೂಸ್ ಕಡಬ) newskadaba.com ಜೂ. 13. ಲಂಡನ್ ಗೆ ಹೊರಟಿದ್ದ ಅಹಮದಾಬಾದ್ ನ ಭೂಮಿ ಚೌಹಾಣ್ ಎಂಬ ಮಹಿಳೆಯೊಬ್ಬರು ಏರ್ ಇಂಡಿಯಾ ವಿಮಾನ ಅಪಘಾತದಿಂದ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಹೌದು, ಭೂಮಿ ಅವರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರಿಂದ ಅವರಿಗೆ ವಿಮಾನವೇರಲು ಅವಕಾಶ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.
ದುರಂತದ ವಿಚಾರ ಕೇಳಿ ನನಗೆ ಭಯವದಿಂದ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರು ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ. ಭೂಮಿ ತಮ್ಮ ಪತಿಯೊಂದಿಗೆ ಲಂಡನ್ನಲ್ಲಿ ವಾಸವಾಗಿದ್ದು, ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು.