ವೈದ್ಯಕೀಯ ಶಿಕ್ಷಣ ಸಚಿವ ಜೂನ್ 17ರಂದು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ  ಡಾ.ಶರಣಪ್ರಕಾಶ್ ಆರ್ ಪಾಟೀಲ ಜೂನ್ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 7:30ಕ್ಕೆ ಮಂಗಳೂರು ಆಗಮನ, 11ಗಂಟೆಗೆ ವಳಚಿಲ್ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್‍ನಲ್ಲಿ ಆಯೋಜಿಸಿದ ”ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್” ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12:30ಕ್ಕೆ ರಾಜೀವ ಗಾಂಧಿ ಆರೋಗ್ಯ ವಿ.ವಿ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ, ಮಧ್ಯಾಹ್ನ 1 ಗಂಟೆಗೆ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಜಿಟಿಟಿಸಿ ಕೇಂದ್ರಕ್ಕೆ ಭೇಟಿ ನೀಡಿ ರಾತ್ರಿ 7:15ಕ್ಕೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top