ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ- ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಹೊತ್ತಿ ಉರಿದ ಘಟನೆ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗದಲ್ಲಿ ನಡೆದಿದೆ.

ಗುಜಿರಿ ಅಂಗಡಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಅದರ ಪಕ್ಕದಲ್ಲಿರುವ ವಸ್ತ್ರ ಮಳಿಗೆಗೂ ಬೆಂಕಿ ಆವರಿಸಿಕೊಂಡಿದೆ. ಘಟನೆಯಲ್ಲಿ ಭಾರೀ ದೊಡ್ಡ ಪ್ರಮಾಣದಲ್ಲಿ ಬೆಂಕಿಯಿಂದಾಗಿ ಸೊತ್ತು ಹಾನಿಯಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಹಾಗೂ ಬಂಟ್ವಾಳ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಹರಸಾಹಸ ಪಡಬೇಕಾಯಿತು. ಮೇಲ್ನೋಟಕ್ಕೆ ಗುಜಿರಿ ಅಂಗಡಿಯಲ್ಲಿ ಶಾರ್ಟ್ ಸಕ್ಯೂಟ್ ನಿಂದಾಗಿ ಅನಾಹುತ ನಡೆದಿರಬಹುದು ಎಂಬ ಹೇಳಲಾಗಿದೆ.

error: Content is protected !!
Scroll to Top