ಚೂರಿ ಇರಿತಕ್ಕೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತ್ಯು

Crime

(ನ್ಯೂಸ್ ಕಡಬ) newskadaba.com ಜೂ. 14. ಚಾಕು ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ ಎಂಬಾತ ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಮಂಗಳೂರಿನ ಯೆಯ್ಯಾಡಿಯಲ್ಲಿ ನಡೆದಿದೆ.

ಯೆಯ್ಯಾಡಿಯಲ್ಲಿ ಕೌಶಿಕ್ ಹಾಗೂ ಇತರರ ನಡುವೆ ಗಲಾಟೆಯಾಗಿತ್ತು. ಗಲಾಟೆಯ ಸಂದರ್ಭದಲ್ಲಿ ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಎಂಬವರು ಚಾಕುವಿನಿಂದ ಕೌಶಿಕ್ ಹೊಟ್ಟೆಗೆ ಇರಿದಿದ್ದರು. ತೀವ್ರ ರಕ್ತಸ್ತ್ರಾವದಿಂದ ಗಾಯಗೊಂಡಿದ್ದಂತ ಕೌಶಿಕ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಚಿಕಿತ್ಸೆ ಫಲಿಸದೇ ಕೌಶಿಕ್ ಮೃತಪಟ್ಟಿದ್ದಾನೆ. ಇನ್ನು ಈ ದಾಳಿ ಇಬ್ಬರ ನಡುವಿನ ಹಳೇ ವೈಷಮ್ಯದ ಕಾರಣದಿಂದ ನಡೆದಿತ್ತು ಎನ್ನಲಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

error: Content is protected !!
Scroll to Top