(ನ್ಯೂಸ್ ಕಡಬ) newskadaba.com ಕಡಬ, ಜೂ. 14. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 13ರಂದು ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಶಿವಾಜಿಯ ಜೀವನ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿದ ರೀತಿಯನ್ನು ಸ್ಪುಟವಾಗಿ ತಿಳಿಸಿದರು. ವಿದ್ಯಾರ್ಥಿಗಳಾದ ರಕ್ಷಾ ಹಾಗೂ ದಿಗಂತ್ ಹಿಂದೂ ಸಾಮ್ರಾಜ್ಯ ದಿನದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ –ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶಿಕ್ಷಕಿ ಶ್ರೀಮತಿ ಸೌಮ್ಯ ಕೆ.ಎ ಕಾರ್ಯಕ್ರಮ ನಿರ್ವಹಿಸಿದರು.