(ನ್ಯೂಸ್ ಕಡಬ) newskadaba.com ಜೂ. 14. ಅಹಮ್ಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪ್ರಕರಣದ ತನಿಖೆಗಾಗಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪ್ರಮಾಣಿತ ನಿರ್ವಹಣಾ ಮಾರ್ಗಸೂಚಿಗಳನ್ನು ರೂಪಿಸಲು ಆದೇಶಿಸಿದೆ.
ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಈ ಸಮಿತಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಗೃಹ ಇಲಾಖೆಯ ಹೆಚ್ಚುವರಿ ಅಥವಾ ಜಂಟಿ ಕಾರ್ಯದರ್ಶಿ, ಗುಜರಾತ್ ಸರ್ಕಾರದ ಗೃಹ ಕಾರ್ಯದರ್ಶಿ, ಗೃಹ ಇಲಾಖೆಯ ಮುಖ್ಯಸ್ಥರು, ಗುಜರಾತ್ನ ಪ್ರಕೃತಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರತಿನಿಧಿ, ಅಹಮ್ಮದಾಬಾದ್ ಪೊಲೀಸ್ ಆಯುಕ್ತರು, ಭಾರತೀಯ ವಾಯುಪಡೆಯ ತಪಾಸಣೆ ಮತ್ತು ಸುರಕ್ಷತೆಯ ಮಹಾ ನಿರ್ದೇಶಕರು, ನಾಗರಿಕ ವಿಮಾನಯಾನ ಸುರಕ್ಷತಾ ದಳದ ಮಹಾ ನಿರ್ದೇಶಕರು, ವಿಶೇಷ ನಿರ್ದೇಶಕರು, ಕೇಂದ್ರ ಸರ್ಕಾರದ ವಿಧಿವಿಜ್ಞಾನ ವಿಭಾಗದ ನಿರ್ದೇಶಕರು ಮತ್ತು ಇತರರನ್ನು ಸಮಿತಿಗೆ ಸದಸ್ಯರನ್ನಾಗಿ ನಿಯೋಜಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿಗಳು ತಿಳಿಸಿದ್ದಾರೆ.