ವೈದ್ಯ ಸಿಬ್ಬಂದಿಗಳಿಗೆ ಮೊಬೈಲ್‌ ಹಾಜರಾತಿ ಕಡ್ಡಾಯ- ಸಚಿವ ಗುಂಡೂರಾವ್‌

(ನ್ಯೂಸ್ ಕಡಬ) newskadaba.com ಜೂ. 16. ಇನ್ನುಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಜುಲೈ 1ರಿಂದ ಮೊಬೈಲ್‌ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಹಲವು ದಿನಗಳಿಂದ ಚಾಲನೆಯಲ್ಲಿದ್ದ ಪ್ರಕ್ರಿಯೆಗಳು ಅಂತಿಮ ಹಂತಕ್ಕೆ ಬಂದಿದ್ದು, ಕೊನೆಗೂ ಸರ್ಕಾರಿ ಆದೇಶ ಹೊರಬಿದ್ದಿದೆ.  ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ದೂರಿಗೆ ಹಿತೈಷಿ ಹಾಡಲು ಈ ನೂತನ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

error: Content is protected !!
Scroll to Top