ಕಾರು ಅಪಘಾತ- ಯುವಕರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಮೃತ ದುರ್ದೈವಿಗಳನ್ನು ಕದ್ರಿ‌ ನಿವಾಸಿ ಅಮನ್ ರಾವ್ ಹಾಗೂ ಓಂ ಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ಡಿವೈಡರ್ ಗೆ ಢಿಕ್ಕಿಯಾಗಿ ಮೋರಿಗೆ ಬಡಿದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

Scroll to Top