ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

NEWSKADABA

(ನ್ಯೂಸ್ ಕಡಬ) newskadaba.com ಜೂ. 18. ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಜಲಜಾಕ್ಷಿ ಎಂಬವರ ಮನೆಗೆ ಸುಳ್ಯ ವಿಧಾನಸಭಾ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರದಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

NEWSKADABA

ಮೃತರ ಕುಟುಂಬಕ್ಕೆ ಸರ್ಕಾರದ ಪರವಾಗಿ ಅಗತ್ಯ ನೆರವು ಒದಗಿಸುವ ಭರವಸೆಯನ್ನು ಶಾಸಕರು ನೀಡಿದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವರಾಮ ಡಿ ಹೆಚ್, ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಣ್ಣ ಜಾಲ್ತಾಡು, ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಘು ಎನ್. ಬಿ ಹಾಗೂ ಸಿಬ್ಬಂದಿಯವರು, ಗ್ರಾಮ ಪಂಚಾಯತ್ ಸದಸ್ಯರುಗಳು, ಆರೋಗ್ಯ ಇಲಾಖಾ ಸಿಬ್ಬಂದಿಗಳು ಜೊತೆಗಿದ್ದರು.

NEWSKADABA
NEWSKADABA
NEWSKADABA
error: Content is protected !!
Scroll to Top