ಏರ್ ಇಂಡಿಯಾ ವಿಮಾನ ಅಪಘಾತ ಮೃತ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಡಾ.ಸಂಶೀರ್

NEWSKADABA

(ನ್ಯೂಸ್ ಕಡಬ) newskadaba.com ಜೂ. 18. ಗುಜರಾತ್‌ ನ ಅಹಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಘೋಷಣೆ ಮಾಡುವ ಮೂಲಕ ಯುಎಇಯಲ್ಲಿರುವ ಭಾರತ ಮೂಲದ ವೈದ್ಯ ಸಂಶೀರ್ ಉದಾರತೆ ಮೆರೆದಿದ್ದಾರೆ.

NEWSKADABA

ಗುಜರಾತ್‌ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದಾಗಿ ವೈದ್ಯಕೀಯ ಕಾಲೇಜಿನ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಪ್ರಯಾಣಿಕರ ಜೊತೆಗೆ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಅದರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವೈದ್ಯರೂ ಇದ್ದರು. ಹಲವು ಮಂದಿ ಗಾಯಗೊಂಡಿದ್ದಾರೆ. ಕೇವಲ ಮೃತರ ಕುಟುಂಬಕ್ಕೆ ಮಾತ್ರವಲ್ಲದೇ ಗಾಯಾಳುಗಳಿಗೂ ಸಹಾಯ ಮಾಡುವುದಾಗಿ ಘೋಷಿಸಿದ್ದಾರೆ.

NEWSKADABA

ಗಂಭೀರವಾಗಿ ಗಾಯಗೊಂಡ ಐದು ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ಮತ್ತು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ವೈದ್ಯರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಕ್ಷಣದ ನೆರವು ಸಿಗುವಂತೆ ನೋಡಿಕೊಳ್ಳಲು ಬಿಜೆ ವೈದ್ಯಕೀಯ ಕಾಲೇಜಿನಲ್ಲಿ ಜೂನಿಯರ್ ವೈದ್ಯರ ಸಂಘದ ಸಮನ್ವಯದ ಸಹಾಯದಿಂದ ಆರ್ಥಿಕ ಸಹಾಯವನ್ನು ವಿತರಿಸಲಾಗುವುದು ಎಂದು ಸಂಶೀರ್ ಅವರ ಹೇಳಿಕೆ ತಿಳಿಸಿದೆ. ಅಬುಧಾಬಿಯಿಂದ ಪರಿಹಾರವನ್ನು ಘೋಷಿಸಿದ ಬುರ್ಜೀಲ್ ಹೋಲ್ಡಿಂಗ್ಸ್‌ನ ಸಂಸ್ಥಾಪಕ ಮತ್ತು ವಿಪಿಎಸ್ ಹೆಲ್ತ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಶಂಶೀರ್, ಅಪಘಾತದ ನಂತರದ ಪರಿಣಾಮಗಳನ್ನು ನೋಡಿ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದರು. ಶಂಶೀರ್ 2010ರಲ್ಲಿ ಮಂಗಳೂರು ವಿಮಾನ ಅಪಘಾತ ಸಂಭವಿಸಿದಾಗ ಕೂಡ ಸಾಕಷ್ಟು ಮಂದಿಗೆ ಆರ್ಥಿಕ ನೆರವು ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸಿದ್ದರು.

NEWSKADABA
NEWSKADABA
error: Content is protected !!
Scroll to Top