ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಪತ್ನಿ ಪ್ರತಿಮಾಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಜೂ.17. ಕಳೆದ ಅಕ್ಟೋಬರ್ ನಲ್ಲಿ ನಡೆದ ಅಜೆಕಾರಿನ ಬಾಲಕೃಷ್ಣ ಪೂಜಾರಿ ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.


ಮೃತ ಬಾಲಕೃಷ್ಣ ಪೂಜಾರಿಯ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಎಂಬವರು ಸೇರಿ ಈ ಕೊಲೆ ಎಸಗಿದ್ದಾರೆ ಎಂಬ ಆರೋಪದಡಿ ಕಳೆದ ಅಕ್ಟೋಬರ್ 25ರಂದು ಅಜೆಕಾರು ಠಾಣಾ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ತನಿಖೆ ಸಂದರ್ಭದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅಜೆಕಾರು ಪೊಲೀಸರು ಆರೋಪ ಪತ್ರ ಸಲ್ಲಿಸಿದ್ದರು. ಇದೀಗ ರಾಜ್ಯ ಹೈಕೋರ್ಟ್, ಪ್ರಕರಣದ ಪರಿಶೀಲನೆಯ ನಂತರ, ಪ್ರತಿಮಾಳಿಗೆ ನಿಗದಿತ ಷರತ್ತುಗಳೊಂದಿಗೆ ಜಾಮೀನು ನೀಡಿದೆ. ಕಳೆದ ಕೆಲವು ತಿಂಗಳ ಹಿಂದೆ ಪ್ರಿಯಕರ ದಿಲೀಪ್ ಹೆಗ್ಡೆ ಕೂಡ ಜಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

error: Content is protected !!
Scroll to Top