ಮಂಗಳೂರು: ನೂತನ ಡಿಸಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ



(ನ್ಯೂಸ್ ಕಡಬ) newskadaba.com ಜೂ. 19. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರು ಬುಧವಾರದಂದು ಸಂಜೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.







ಮುಲ್ಲೈ ಮುಗಿಲನ್ ಅವರು 2023ರ ಜೂ.17ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪುರ್ಣಗೊಳಿಸಿರುವ ಬೆನ್ನಲ್ಲೇ ಅವರಿಗೆ ವರ್ಗಾವಣೆಯಾಗಿದೆ.






2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್‌ ಎಚ್‌.ವಿ ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ ಬೆಂಗಳೂರಿನ ಸೇವಾ ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು. ಅದಕ್ಕೂ ಹಿಂದೆ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ, ಕೋಲಾರ ಜಿ.ಪಂ. ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದರು.

error: Content is protected !!
Scroll to Top