ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕರ್ನಾಟಕ ರಾಯಭಾರಿಯಾಗಿ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ನೇಮಕ

(ನ್ಯೂಸ್ ಕಡಬ) newsksdaba.com ಜೂ. 19. ಈ ಬಾರಿ ದೆಹಲಿಯಲ್ಲಿ ನಡೆಯಿರುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಓರ್ವರಾಗಿ ಪುತ್ತೂರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಬಿರಾವು ಅವರು ಆಯ್ಕೆಯಾಗಿದ್ದಾರೆ.

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತೀ ರಾಜ್ಯದಿಂದ 15 ವರ್ಷದಿಂದ 28 ವರ್ಷ ವಯೋಮಿತಿವರೆಗಿನ ಯುವಜನರನ್ನು ನೇಮಕ ಮಾಡುತ್ತಿದ್ದು, ಕರ್ನಾಟಕ ರಾಜ್ಯದಿಂದ ಈ ಬಾರಿ ಶ್ರೀಕಾಂತ್ ಬಿರಾವು ವಿಶೇಷ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ನೆಹರು ಯುವ ಕೇಂದ್ರ ಮಂಗಳೂರಿನ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಹಾಗೂ ಆಡಳಿತಾಧಿಕಾರಿ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top