ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..!

crime, arrest, suspected


(ನ್ಯೂಸ್ ಕಡಬ) newskadaba.com ಜೂ. 21. ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ.







 

ಬಂಧಿತ ಯುವಕನನ್ನು ಉಪ್ಪಳ ಗೇಟ್ ಸಮೀಪದ ಇಸ್ಮಾಯಿಲ್ ರಿಯಾಜ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ಹಾಗೂ ಪ್ಲಸ್ ಟು ವಿದ್ಯಾರ್ಥಿಗಳ ಗುಂಪುಗಳ ನಡುವೆ ಈ ಘರ್ಷಣೆ ನಡೆದಿದ್ದು, ಹೊರಗಿನಿಂದ ಬಂದ ಗುಂಪು ಕೂಡಾ ಹೊಡೆದಾಟದಲ್ಲಿ ಭಾಗಿಯಾಗಿತ್ತು ಎನ್ನಲಾಗಿದೆ.






 

ಸ್ಥಳಕ್ಕೆ ಬಂದ ಪೊಲೀಸರು ಘರ್ಷಣೆಯನ್ನು ನಿಯಂತ್ರಿಸಿ, ಘಟನೆಗೆ ಸಂಬಂಧಿಸಿದಂತೆ 15 ವಿದ್ಯಾರ್ಥಿಗಳು ಹಾಗೂ 10 ಹೊರಗಿನಿಂದ ಬಂದ ತಂಡದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದು ತನಿಖೆ ಮುಂದುವರಿಸಿದ್ದಾರೆ.

error: Content is protected !!
Scroll to Top