(ನ್ಯೂಸ್ ಕಡಬ) newskadaba.com ಜೂ. 21. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಇಲಖಾಧಿಕಾರಿಗಳು ಸೇರಿ ತುಳು ಮಾತನಾಡಬಾರದೆಂದು ಸರ್ಕಾರವು ಸುತ್ತೋಲೆ ಹೊರಡಿಸಿದ್ದು, ತುಳು ಭಾಷೆಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಈ ಕುರಿತಾಗಿ ಮಾತನಾಡಿರುವ ಕೋಟಾ ಶ್ರೀನಿವಾಸ ಪೂಜಾರಿಮ, ವಿಧಾನಸಭೆಯಲ್ಲಿ ಅಧ್ಯಕ್ಷರೇ ತುಳು ಮಾತನಾಡುವಾಗ ಗ್ರಾಮ ಸಭೆಗಳಲ್ಲಿ ಮಾತನಾಡುವುದು ತಪ್ಪು ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದಾರೆ.
ಹಾಗೂ ಗ್ರಾಮ ಸಭೆಗಳಲ್ಲಿ ಗ್ರಾಮದ ಜನರಿಗೆ ಸರಿಯಾಗುವಂತಹ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಬೇಕು ಯಾವುದೇ ಭಾಷೆಯ ಏರಿಕೆಯೂ ಸರಿಯಲ್ಲ ಎಂದು ಶ್ರೀನಿವಾಸ ಪೂಜಾರಿ ಕಿಡಿ ಕಾರಿದ್ದಾರೆ.













