ಮರ್ಧಾಳ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಎ.06. ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಅವಿವಾಹಿತ ವ್ಯಕ್ತಿಯೋರ್ವರು ತನ್ನ ಮನೆಯ ಸಮೀಪದ ಮರಕ್ಕೆ‌ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡಾತನನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಅಂತಿಬೆಟ್ಟು ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರ ಮೋಹನ್ (30) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಈತನಿಗೆ ಮದುವೆ ನಿಶ್ಚಯಿಸಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಶುಕ್ರವಾರದಂದು ಬೆಳಿಗ್ಗೆ ತನ್ನ ಮನೆ ಸಮೀಪದ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. ಈ ಬಗ್ಗೆ ಮೃತನ ಸಹೋದರ ಪೂವಪ್ಪ ಗೌಡ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ ➤ ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ

error: Content is protected !!
Scroll to Top