(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 27. ದ್ವಿಚಕ್ರ ವಾಹನಗಳ ಮೇಲೆ ಟೋಲ್ ತೆರಿಗೆ ವಿಧಿಸುವ ಬಗ್ಗೆ ಕೆಲವು ದಾರಿತಪ್ಪಿಸುವ ಸುದ್ದಿಗಳು ಹರಿದಾಡುತ್ತಿದ್ದು, ಅಂತಹ ಯಾವುದೇ ನಿರ್ಧಾರವನ್ನು ಪ್ರಸ್ತಾಪಿಸಲಾಗಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ದ್ವಿಚಕ್ರ ವಾಹನಗಳಿಗೆ ಟೋಲ್ನಲ್ಲಿ ಸಂಪೂರ್ಣ ವಿನಾಯಿತಿ ಮುಂದುವರಿಯಲಿದೆ. ಸತ್ಯವನ್ನು ತಿಳಿಯದೆ ದಾರಿತಪ್ಪಿಸುವ ಸುದ್ದಿಗಳನ್ನು ಹರಡುವುದು ಮತ್ತು ಸಂಚಲನ ಮೂಡಿಸುವುದು ಆರೋಗ್ಯಕರ ಪತ್ರಿಕೋದ್ಯಮದ ಲಕ್ಷಣವಲ್ಲ. ನಾನು ಅದನ್ನು ಖಂಡಿಸುತ್ತೇನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.










