(ನ್ಯೂಸ್ ಕಡಬ) newskadaba.com ಜೂ. 28. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು.
ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.









