(ನ್ಯೂಸ್ ಕಡಬ) newskadaba.com ಜು. 02. ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವಿಟ್ಲ ತಾಲೂಕಿನ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಪೋಲೀಸ್ ಉಪ ನಿರೀಕ್ಷಕರಾದ ಶ್ರೀ ರತ್ನ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು
ಈ ಸಂದರ್ಭದಲ್ಲಿ NDRF INSPECTOR ಶ್ರೀ ಶಾಂತಿ ಲಾಲ್ ಜಟಿಯಾ, ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್, ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ, ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ, ಗಣೇಶ್ ಆಚಾರ್ಯ, ಸುರೇಶ್ ಗೌಡ, ಶೌರ್ಯ ಸಮಿತಿ ಮಾಸ್ಟರ್ ಸುರೇಶ್ ಮೊದಲಾದವರು ಉಪಸ್ಥಿತರಿದ್ದರು
ತರಬೇತಿ ಕಾರ್ಯಗಾರದಲ್ಲಿ ವಿಟ್ಲ ತಾಲೂಕಿನ 8 ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಸ್ವಯಂ ಸೇವಕರು ಭಾಗವಹಿಸಿದ್ದರು.









