ವರ್ಕಾಡಿಯಲ್ಲಿ ಮನೆಯೊಂದಕ್ಕೆ ಗುಂಡಿನ ದಾಳಿ..!



(ನ್ಯೂಸ್ ಕಡಬ) newskadaba.com ಜು. 03. ಅಪರಿಚಿತರು ಮನೆಯೊಂದಕ್ಕೆ ಗುಂಡಿನ ದಾಳಿ ನಡೆಸಿದ ಘಟನೆ ವರ್ಕಾಡಿಯಲ್ಲಿ ಇಂದು ಮುಂಜಾನೆ ನಡೆದಿದೆ.







ಘಟನೆಯಲ್ಲಿ ಮನೆಯ ಕಿಟಿಕಿ ಗಾಜುಗಳು ಒಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ಎಂಬವರ ಮನೆಯ ಮೇಲೆ ಮುಂಜಾನೆ ಎರಡೂವರೆ ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಶಬ್ದ ಕೇಳಿ ಹರೀಶ್ ಹಾಗೂ ಕುಟುಂಬ ಗಮನಿಸಿದಾಗ ದುಷ್ಕರ್ಮಿಗಳು ಕಾರು ಮತ್ತು ಬೈಕ್ ನಲ್ಲಿ ಪರಾರಿಯಾಗಿರುವುದಾಗಿ ಹರೀಶ್ ಮಂಜೇಶ್ವರ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.






 

ಸ್ಥಳಕ್ಕೆ ಮಂಜೇಶ್ವರ ಠಾಣಾ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

error: Content is protected !!
Scroll to Top