ವಾರದೊಳಗೆ ಕೆಂಪು ಕಲ್ಲು ಸಮಸ್ಯೆ ಬಗೆಹರಿಯದಿದ್ದರೆ ಪ್ರತಿಭಟನೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಯನ್ನು ವಾರದೊಳಗೆ ಬಗೆಹರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ ಹಿನ್ನೆಲೆ ಜುಲೈ 3ರಂದು ನಡೆಸಬೇಕಿದ್ದ ಪ್ರತಿಭಟನೆಯನ್ನು ಮುಂದೂಡಿದ್ದೇವೆ. ಒಂದು ವಾರದ ಬಳಿಕವೂ ಸಮಸ್ಯೆ ಬಗೆಹರಿಯದಿದ್ದರೆ ಮುಂದಕ್ಕೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೆಂಪು ಮುರ ಇಟ್ಟಿಗೆ ಮಾಲಕರ ಒಕ್ಕೂಟ ಹೇಳಿದೆ.







 

ಜಿಲ್ಲೆಯಲ್ಲಿ ಕೆಂಪು ಮುರ ಇಟ್ಟಿಗೆ ತೆಗೆಯಲು ಪರವಾನಿಗೆ ಸರಳೀಕರಣದ ಬಗ್ಗೆ ಜಿಲ್ಲಾಧಿಕಾರಿ ಜತೆ ಬುಧವಾರ ಸಭೆ ನಡೆದಿದೆ.






ವಾರದೊಳಗೆ ಬೆಂಗಳೂರಿನಲ್ಲಿ ಗಣಿ ಸಚಿವರ ಸಮ್ಮುಖ ಉನ್ನತ ಮಟ್ಟದ ಸಭೆ ನಡೆದು ಸಮಸ್ಯೆಗೆ ಪರಿಹಾರ ರೂಪಿಸಲಾಗುವುದು ಎಂಬ ಭರವಸೆಯಂತೆ ಪ್ರತಿಭಟನೆ ಮುಂದೂಡಿದ್ದೇವೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಸತೀಶ್ ಆಚಾರ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

error: Content is protected !!
Scroll to Top